Friday, June 16, 2023

ಟೈಟಲ್ ಟೀಸರ್ ನಲ್ಲೇ ನೋಡುಗರ ಮನ ಗೆಲ್ಲುತ್ತಿದೆ "ಆಟ ಸಾಮಾನು"

ಟೈಟಲ್ ಟೀಸರ್ ನಲ್ಲೇ ನೋಡುಗರ ಮನ ಗೆಲ್ಲುತ್ತಿದೆ "ಆಟ ಸಾಮಾನು"
ಮಧು ಕಲ್ಯಾಣ್ ಕಥೆ, ಚಿತ್ರಕಥೆ ಬರೆದು‌ ನಿರ್ದೇಶಿಸುತ್ತಿರುವ ಚಿತ್ರ
"ಆಟ ಸಾಮಾನು". ಇತ್ತೀಚೆಗೆ ಈ ಚಿತ್ರದ ಟೈಟಲ್ ಟೀಸರ್ ಬಿಡುಗಡೆಯಾಯಿತು. ನಿವೃತ್ತ ಐ ಎ ಎಸ್ ಅಧಿಕಾರಿ ಡಾ||ಸಿ.ಸೋಮಶೇಖರ್ ಟೈಟಲ್ ಟೀಸರ್ ಅನಾವರಣ ಮಾಡಿದರು. ವಿವಿಧ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ನಾನು ಈ ಹಿಂದೆ ಎರಡು ಚಿತ್ರಗಳನ್ನು ನಿರ್ಮಿಸಿದ್ದೆ. " ಆಟ ಸಾಮಾನು" ನನ್ನ ಮೂರನೇ ಚಿತ್ರ. ಈ ಚಿತ್ರವನ್ನು "ಬಂಧು ಮಿತ್ರರ" ಜೊತೆ ಸೇರಿ ನಿರ್ಮಿಸುತ್ತಿದ್ದೇನೆ ಹಾಗೂ ನಿರ್ದೇಶನ ಕೂಡ ಮಾಡುತ್ತಿದ್ದೇನೆ. "ಆಟ ಸಾಮಾನು" ಕ್ರೀಡಾ ಕಥಾಹಂದರ ಹೊಂದಿರುವ ಮಹಿಳಾ ಪ್ರಧಾನ ಚಿತ್ರ. ನಮ್ಮ ಮನೆ ಬಳಿ ಹೊಸ ಕಟ್ಟಡ ಕಟ್ಟುತ್ತಿದ್ದಾರೆ. ಅಲ್ಲಿ ಕೆಲಸ ಮಾಡುವ ಮಕ್ಕಳು ಮರಳು, ಇಟ್ಟಿಗೆ ಹಾಗೂ ಸೀಮೆಂಟ್ ಜೊತೆ ಆಡುತ್ತಾರೆ. ಎದುರಿಗೆ ಶ್ರೀಮಂತರ ಮನೆ ಇದೆ. ಅಲ್ಲಿ ಮಕ್ಕಳು ಆಟವಾಡಲು ಸಕಲ ಆಟಿಕೆಗಳು ಇದೆ. ಅವರು ಆಡುತ್ತಿರುವುದನ್ನು ನೋಡಿದ ಕಾರ್ಮಿಕರ ಮಗು ಕಣ್ಣೀರು ಸುರಿಸುತ್ತಾ ನಿಂತಿರುತ್ತದೆ. ಆ ಮಗುವನ್ನು ನೋಡಿದ ನನ್ನ ಮಡದಿ ಆ ಮಗುವಿಗೆ ಕೆಲವು "ಆಟ ಸಾಮಾನು" ತಂದು ಕೊಡುತ್ತಾರೆ. ಚಿತ್ರಕ್ಕೆ ಈ ಶೀರ್ಷಿಕೆಯಿಡಲು ನನ್ನ‌ ಮಡದಿಯೇ ಸ್ಪೂರ್ತಿ ಎನ್ನಬಹುದು. ‌ಇದನ್ನು ಟೀಸರ್ ನಲ್ಲಿ ತೋರಿಸುವ ಪ್ರಯತ್ನ ಮಾಡಿದ್ದೇನೆ.‌ ಮುಂದೆ ಚಿತ್ರದಲ್ಲಿ ಅದೇ‌ ಹುಡುಗಿ ಕ್ರೀಡಾಲೋಕದಲ್ಲಿ ದೊಡ್ಡ ಸಾಧನೆ ಮಾಡುತ್ತಾಳೆ. ಇದು ಕಥೆಯ ಎಳೆ. ಜುಲೈನಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಬೆಂಗಳೂರಿನಲ್ಲೇ ಚಿತ್ರೀಕರಣವಾಗಲಿದೆ. ಕಲಾವಿದರ ಆಯ್ಕೆ ನಡೆಯುತ್ತಿದೆ ಎಂದು ಮಧು ಕಲ್ಯಾಣ್ ಚಿತ್ರದ ಕುರಿತು ವಿವರಣೆ ನೀಡಿದರು.
ಬಿಲ್ಡಪ್ ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಸ್ಟಿಲ್ ವೆಂಕಟೇಶ್ ಛಾಯಾಗ್ರಹಣ, ಪ್ರದ್ಯೋತನ್ ಸಂಗೀತ ನಿರ್ದೇಶನ ಹಾಗೂ ಉಮೇಶ್ ಆರ್ ಬಿ ಅವರ ಸಂಕಲನವಿದೆ.

Thursday, June 15, 2023

ಧೋನಿ ನಿರ್ಮಾಣದ ಚೊಚ್ಚಲ ಸಿನಿಮಾ ಬಿಡುಗಡೆಗೆ ರೆಡಿ...ಕರ್ನಾಟಕದಲ್ಲಿಯೂ ರಿಲೀಸ್ ಆಗಲಿದೆ LGM-ಲೆಟ್ಸ್ ಗೆಟ್ ಮ್ಯಾರೀಡ್

ಧೋನಿ ನಿರ್ಮಾಣದ ಚೊಚ್ಚಲ ಸಿನಿಮಾ ಬಿಡುಗಡೆಗೆ ರೆಡಿ...ಕರ್ನಾಟಕದಲ್ಲಿಯೂ ರಿಲೀಸ್ ಆಗಲಿದೆ LGM-ಲೆಟ್ಸ್ ಗೆಟ್ ಮ್ಯಾರೀಡ್
ಕ್ಯಾಪ್ಟನ್ ಕೂಲ್ ಎಂ.ಎಸ್ ಧೋನಿ ಪತ್ನಿ‌ ಸಾಕ್ಷಿ ಜೊತೆಗೂಡಿ ತಮ್ಮದೇ ಧೋನಿ ಎಂಟರ್ ಟೇನ್ಮೆಂಟ್ ಮೂಲಕ ನಿರ್ಮಿಸುತ್ತಿರುವ ಚೊಚ್ಚಲ ಸಿನಿಮಾ ಲೆಟ್ಸ್ ಗೆಟ್ ಮ್ಯಾರೀಡ್.
ಟೀಸರ್ ಮೂಲಕ ನಗುವಿನ ಕಿಕ್ ಕೊಟ್ಟಿರುವ ಈ ಚಿತ್ರವನ್ನು ರಾಜ್ಯದಲ್ಲಿಯೂ ಬಿಡುಗಡೆ ಮಾಡಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿದೆ. ಇತ್ತೀಚಿಗೆ ಪರಭಾಷೆ ಸಿನಿಮಾಗಳಿಗೆ ಕರುನಾಡಿನಲ್ಲಿ ಭರಪೂರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಹೀಗಾಗಿ ಲೆಟ್ಸ್ ಗೆಟ್ ಮ್ಯಾರೀಡ್ ಸಿನಿಮಾ ಕೂಡ ಕರ್ನಾಟಕದಲ್ಲಿ ತೆರೆಕಾಣಲಿದೆ ಎಂದು ಚಿತ್ರತಂಡ ತಿಳಿಸಿದೆ. 
ಫ್ಯಾಮಿಲಿ ಎಂಟರ್​ಟೇನರ್ ಕಥಾಹಂದರ ಹೊಂದಿರುವ ಸಿನಿಮಾವನ್ನು ರಮೇಶ್ ತಮಿಳ್​ಮಣಿ ನಿರ್ದೇಶನ ಮಾಡಿದ್ದಾರೆ. ನಾಯಕ ಹರೀಶ್ ಕಲ್ಯಾಣ್, ನಾಯಕಿ ಇವಾನಾ ನಟಿಸಿದ್ದು, ಹಿರಿಯ ನಟಿ ನದಿಯಾ, ಯೋಗಿ ಬಾಬು ಮತ್ತು ಆರ್‌ಜೆ ವಿಜಯ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಲೆಟ್ಸ್ ಗೆಟ್ ಮ್ಯಾರೀಡ್ ಸಿನಿಮಾವನ್ನು ಆದಷ್ಟು ಬೇಗ ತೆರೆಗೆ ತರಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿದೆ. ರಮೇಶ್ ತಮಿಳ್ಮಣಿ ಸಿನಿಮಾಗೆ ಆಕ್ಷನ್ ಕಟ್ ಹೇಳುವುದರ ಜೊತೆಗೆ ಸಂಗೀತ ನಿರ್ದೇಶನದ ಜವಾಬ್ದಾರಿ ಕೂಡ ನಿಭಾಯಿಸಿದ್ದಾರೆ. ಟೀಸರ್ ಗೆ ಅದ್ಭುತ ರೆಸ್ಪಾನ್ಸ್ ಸಿಕ್ಕಿದ್ದು, ಶೀಘ್ರದಲ್ಲೇ ಆಡಿಯೋ ಹಾಗೂ ಟ್ರೇಲರ್‌ನ್ನು ಚಿತ್ರತಂಡ ಬಿಡುಗಡೆ ಮಾಡಲಿದೆ.

ನವೀನ್ ಶಂಕರ್ ಅಭಿನಯದ "ಕ್ಷೇತ್ರಪತಿ" ಚಿತ್ರದ ಟೀಸರ್ ಗೆ ಅಭಿಮಾನಿಗಳು ಫಿದಾ

ನವೀನ್ ಶಂಕರ್ ಅಭಿನಯದ "ಕ್ಷೇತ್ರಪತಿ" ಚಿತ್ರದ ಟೀಸರ್ ಗೆ ಅಭಿಮಾನಿಗಳು ಫಿದಾ
"ಗುಲ್ಟು" ಚಿತ್ರದ ಮೂಲಕ ಜನಪ್ರಿಯರಾಗಿ, "ಹೊಂದಿಸಿ ಬರೆಯಿರಿ", "ಹೊಯ್ಸಳ" ಚಿತ್ರಗಳ ಮೂಲಕ ಅಪಾರ ಜನಮನ್ನಣೆ ಪಡೆದಿರುವ ನಟ ನವೀನ್ ಶಂಕರ್.
 ಪ್ರಸ್ತುತ ನವೀನ್ ಶಂಕರ್ "ಕ್ಷೇತ್ರಪತಿ" ಚಿತ್ರದಲ್ಲೂ ನಾಯಕರಾಗಿ ನಟಿಸಿದ್ದು, ಈ ಚಿತ್ರದ ಟೀಸರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಈ ಚಿತ್ರದ ನವೀನ್ ಶಂಕರ್ ಅವರ ಲುಕ್ ಗೆ ಹಾಗೂ ಟೀಸರ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.
ಆಶ್ರಗ ಕ್ರಿಯೇಷನ್ಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ. "ಕ್ಷೇತ್ರಪತಿ" ಪೊಲಿಟಿಕಲ್ ಡ್ರಾಮ ಕಥಾಹಂದರ ಹೊಂದಿದೆ. ಶ್ರೀಕಾಂತ್ ಕಟಗಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇದು ಉತ್ತರ ಕರ್ನಾಟಕ ಭಾಗದಲ್ಲಿ ನಡೆಯುವ ಕಥೆ. ಹಾಗಾಗಿ ಹೆಚ್ಚಿನ ಭಾಗದ ಚಿತ್ರೀಕರಣ ಉತ್ತರ ಕರ್ನಾಟಕದಲ್ಲೇ ನಡೆದಿದೆ‌.
ಕೆ.ಜಿ.ಎಫ್ ಖ್ಯಾತಿಯ ರವಿ ಬಸ್ರೂರ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ವೈ ವಿ ಬಿ ಶಿವಸಾಗರ್ ಛಾಯಾಗ್ರಹಣ, ಮನು ಶೇಡ್ಗಾರ್ ಸಂಕಲನ, ನರಸಿಂಹ ಸಾಹಸ ನಿರ್ದೇಶನ ಹಾಗೂ ಜೀವನ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. 
ಈ ಹಿಂದೆ "ಹೊಂದಿಸಿ ಬರೆಯಿರಿ" ಚಿತ್ರದಲ್ಲಿ ನಾಯಕ - ನಾಯಕಿಯಾಗಿ ನಟಿಸಿ, ಜನಮನ ಗೆದ್ದಿರುವ, ನವೀನ್ ಶಂಕರ್ ಹಾಗೂ ಅರ್ಚನಾ ಜೋಯಿಸ್ "ಕ್ಷೇತ್ರಪತಿ" ಚಿತ್ರದಲ್ಲೂ ನಾಯಕ - ನಾಯಕಿಯಾಗಿ ನಟಿಸಿದ್ದಾರೆ. ಅಚ್ಯುತ್ ಕುಮಾರ್, ರಾಹುಲ್ ಐನಾಪುರ, ಕೃಷ್ಣ ಹೆಬ್ಬಾಳೆ, ಶೈಲಶ್ರೀ ಅರಸ್, ನಾಟ್ಯ ರಂಗ, ಹರ್ಷ ಅರ್ಜುನ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಫೆಬ್ರವರಿ 23 ರಂದು ತನುಷ್ ಶಿವಣ್ಣ - ಸೋನಾಲ್ ಮೊಂತೆರೊ ಜೋಡಿಯ "Mr ನಟ್ವರ್ ಲಾಲ್" ಚಿತ್ರ ತೆರೆಗೆ....

ಫೆಬ್ರವರಿ 23 ರಂದು ತನುಷ್ ಶಿವಣ್ಣ - ಸೋನಾಲ್ ಮೊಂತೆರೊ ಜೋಡಿಯ "Mr ನಟ್ವರ್ ಲಾಲ್" ಚಿತ್ರ ತೆರೆಗೆ. ತನುಷ್ ಸಿನಿಮಾಸ್ ಲಾಂಛನದಲ್ಲಿ ತನುಷ್ ಶ...